April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya
error: Content is protected !!