September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya
error: Content is protected !!