22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!