25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya
error: Content is protected !!