September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಮಾ.13 ರಂದು ನಡೆಯಿತು.
ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಹೋಮ, ಕಲಶಪೂಜೆ, ಊರವರಿಂದ ಹೊರ ಕಾಣಿಕೆ, ಊರವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಉಡುಪಿ ಶ್ರೀರಾಮ ತೀರ್ಥ ಮಠ ಕಾಣಿಯೂರು ಮೂಲ ಮಹಾಸಂಸ್ಥಾನಮ್ ನ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಜಗದ್ಗುರು ಶ್ರೀಮನ್ಮಧ್ವಾಚಾರ್ಯ ರವರಿಗೆ ವ್ಯವಸ್ಥಾಪನ ಸಮಿತಿ ಸದಸ್ಯರು ಅಭಿವೃದ್ಧಿ ಸಮಿತಿ ಸದಸ್ಯರು, ವರಮಹಾಲಕ್ಷ್ಮಿ ಸಮಿತಿಯ ಸದಸ್ಯರಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು.

ನಂತರ ಸ್ವಾಮೀಜಿಯಿಂದ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಭರತ್ ಶೆಟ್ಟಿ, ಅರ್ಚಕರದ ಅಶೋಕ್ ಭಟ್, ಸಮಿತಿಯ ಸದಸ್ಯರಾದ ಪೂವಪ್ಪ ಬಂಗೇರ, ದುಗ್ಗಪ್ಪಗೌಡ, ದೇಜಪ್ಪ ಪೂಜಾರಿ ಮಹೇಶ್, ಜಯಪ್ರಕಾಶ್, ಪೂವಪ್ಪ ಗೌಡ, ಆನಂದ ಮಡಿವಾಳ ಉಪಸ್ಥಿತರಿದ್ದರು.

ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಪೋಸoದೊಡಿ. ಸ್ವಾಗತಿಸಿ, ದೇವದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ , ಶ್ರೀ ದೇವರುಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಆಶ್ಲೇಷಾ ಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ದುರ್ಗಾಪೂಜೆ, ರಂಗಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಲಿದೆ.


ಮಾರ್ಚ್ ೧೪ರಂದು ಬೆಳಿಗ್ಗೆ ಗಣಪತಿ ಹೋಮ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ ಹಾಗೂ ಬಟ್ಟಲು ಕಾಣಿಕೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ನೇಮೋತ್ಸವ ಜರುಗಲಿದೆ.

Related posts

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya
error: Content is protected !!