September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

ಬಂದಾರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಸುಮಾರು 23 ವರ್ಷ ಗಣಿತ ಶಿಕ್ಷಕರಾಗಿ, ಕೆಲವು ಸಮಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ಇವರು ಪದೋನ್ನತಿಗೊಂಡು ಸರ್ಕಾರಿ ಪ್ರೌಢ ಶಾಲೆ ಹಳೇಪೇಟೆ ಉಜಿರೆಗೆ ವರ್ಗಾವಣೆಗೊಂಡಿರುವ ಪ್ರಯುಕ್ತ ಅವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಊರವರ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಮಾ, 9 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮಹಾಬಲ ಗೌಡ ವಹಿಸಿದ್ದು, ಕೊರಗಪ್ಪರು ಗಣಿತ ವಿಷಯವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಬೋಧಿಸಿ, ಮಕ್ಕಳಿಗೆ ಅಚ್ಚು ಮೆಚ್ಚಿನ ಶಿಕ್ಷಕರಾಗಿದ್ದರು ಎಂದು ಹೇಳಿದರು. ಶಾಲಾ ಸ್ಥಾಪನೆಗೆ ಕಾರಣ ಕರ್ತರಾದ ಕೊಂಕನೊಟ್ಟು ದೇಜಪ್ಪ ಗೌಡ , ಹಿರಿಯರಾದ ಹೊನ್ನಪ್ಪ ಗೌಡ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಅನಿತಾ , ಕಂಚರೊಟ್ಟು ಡೀಕಯ್ಯ ಗೌಡ, ಎಸ್.ಡಿ.ಎಂ.ಸಿ.ಯ ಸದಸ್ಯರು ಉಪಸ್ಥಿತರಿದ್ದರು. ಶೇಖರ್ ಎನ್., ಮಹೇಶ್ ನಿಲಜಿ , ವಿವೇಕಾನಂದ ಗೌಡ, ಮಹೇಶ್ ಎ. ಕೊರಗಪ್ಪರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.

ಹಳೆವಿದ್ಯಾರ್ಥಿಗಳಾದ ಸುರಕ್ಷಿತ, ನವೀನ್ ಪ್ರಕಾಶ್ , ವಿದ್ಯಾರ್ಥಿಗಳಾದ, ಶ್ರದ್ಧಾ, ಪಲ್ಲವಿ, ವನ್ಯಶ್ರೀ, ದಿವ್ಯಾ ಗುರುಗಳ ಗುಣಗಾನ ಮಾಡಿದರು. ಕನ್ನಡ ಶಿಕ್ಷಕಿ ಹೇಮಲತಾ ಅಭಿನಂದನಾ ಪತ್ರ ವಾಚಿಸಿದರು. ಕೊರಗಪ್ಪ , ಮತ್ತು ಅವರ ಪತ್ನಿ ಶ್ರೀಮತಿ ತ್ರಿವೇಣಿಯವರನ್ನು ಅಭಿನಂದಿಸಲಾಯಿತು.

ವಿದ್ಯಾರ್ಥಿನಿಯರಾದ ಗಣ್ಯಶ್ರೀ, ರಶ್ಮಿತಾ, ಯಶಸ್ವಿಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ದೀಕ್ಷಾ ವಂದಿಸಿದರು. ವಿಜಯ ಕುಮಾರ್ ಎಂ ಕೊಯ್ಯೂರು, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya
error: Content is protected !!