25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!