April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು.

ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ ಸವಿಸ್ತಾರವಾಗಿ ಯುವಮೋರ್ಚಾ ಪ್ರಭಾರಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ವಹಿಸಿ ಯುವ ಚೌಪಾಲ್, ಟೆನ್ ಯೂತ್ ಒನ್ ಗ್ರಾಮ್ , ಗೋಡೆ ಬರಹ, ಪ್ರಧಾನಿ ನರೇಂದ್ರ ಮೋದಿಜಿ ಸಾಧನೆಯ ರೀಲ್ಸ್ ಸ್ಪರ್ಧೆಯ ಬಗ್ಗೆ, ಯುವ ಮೋರ್ಚಾ ಬಲಿಷ್ಠಗೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಸಂಘಟತ್ಮಕವಾಗಿ ದುಡಿಯೋಣ, ಪಕ್ಷವನ್ನು ಇನ್ನಷ್ಟು ಬಲಿಷ್ಠಪಡಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ನೇತಾರ ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಧನ್ಯವಾದವಿತ್ತರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ