38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು. ಇವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ದಿವ್ಯ. ಎ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಪ್ರೊ ಸುರೇಶ್ ವಿ, ಸಂಚಾಲಕರು ವಿದ್ಯಾರ್ಥಿ ಪ್ರತಿಭಾ ವೇದಿಕೆ, ಡಾ.ರವಿ ಎಂ. ಎನ್. ಸಂಚಾಲಕರು ಸ್ನಾತಕೋತ್ತರ ವಿಭಾಗ, ಪ್ರೊ ನವೀನ್ ಹಾಗೂ ಪ್ರೊ ರಾಜೇಶ್ವರಿ ವಾಣಿಜ್ಯ ಶಾಸ್ತ್ರ ವಿಭಾಗ, ಪ್ರೊ ರಶ್ಮಿ, ನಿರ್ವಹಣಾ ವಿಭಾಗ ಹಾಗೂ ಪ್ರೊ ಕವಿತಾ, ಇತಿಹಾಸ ವಿಭಾಗ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತೃತೀಯ ಬಿಕಾಂನ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ವಿನುತ ಹಾಗೂ ತಂಡದವರು ಪ್ರಾರ್ಥಿಸಿ, ಅಂಕಿತ ಸ್ವಾಗತಿಸಿ, ವನಿತಾ ಧನ್ಯವಾದವಿತ್ತರು.

Related posts

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya
error: Content is protected !!