24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು. ಇವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ದಿವ್ಯ. ಎ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಪ್ರೊ ಸುರೇಶ್ ವಿ, ಸಂಚಾಲಕರು ವಿದ್ಯಾರ್ಥಿ ಪ್ರತಿಭಾ ವೇದಿಕೆ, ಡಾ.ರವಿ ಎಂ. ಎನ್. ಸಂಚಾಲಕರು ಸ್ನಾತಕೋತ್ತರ ವಿಭಾಗ, ಪ್ರೊ ನವೀನ್ ಹಾಗೂ ಪ್ರೊ ರಾಜೇಶ್ವರಿ ವಾಣಿಜ್ಯ ಶಾಸ್ತ್ರ ವಿಭಾಗ, ಪ್ರೊ ರಶ್ಮಿ, ನಿರ್ವಹಣಾ ವಿಭಾಗ ಹಾಗೂ ಪ್ರೊ ಕವಿತಾ, ಇತಿಹಾಸ ವಿಭಾಗ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತೃತೀಯ ಬಿಕಾಂನ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ವಿನುತ ಹಾಗೂ ತಂಡದವರು ಪ್ರಾರ್ಥಿಸಿ, ಅಂಕಿತ ಸ್ವಾಗತಿಸಿ, ವನಿತಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!