April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ.


ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ (2019) ಜಾರಿಗೆ ಬರಲಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕ್ರಮವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಜನರು ಈ ಕಾನೂನನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದರು.
ಚುನಾವಣಾ ಸೋಲಿನ ಭಯ ಮತ್ತು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದ ಚುನಾವಣಾ ಬಾಂಡ್ ಗಳಲ್ಲಿನ ಅಕ್ರಮಗಳಿಂದಾಗಿ ಜನರನ್ನು ವಿಭಜಿಸಲು ಮತ್ತು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಘೋಷಣೆ ಮಾಡುತ್ತಿರುವ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಆರೋಪಿಸಿದರು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಬಂಗೇರಕಟ್ಟೆ, ಪಣಕಜೆ, ಕಡವಿನ ಬಾಗಿಲು, ಕುದ್ರಡ್ಕ, ಅಂಡೆತಡ್ಕ, ಬಾಜಾರು, ಪೆರಲ್ದರ ಕಟ್ಟೆ, ಲಾಯಿಲ, ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯನಗರ ಕಡೆಗಳಲ್ಲಿ ಮಂಗಳವಾರ ರಾತ್ರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಹಾಗೂ CAA ವಿರುದ್ಧ ಘೋಷಣೆ ಕೂಗುವ ಮೂಲಕ ಎಸ್‌ಡಿಪಿಐ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ನಾಗರೀಕರು ಬೀದಿಗೆ ಬಂದು ಪ್ರತಿಭಟನೆ ನಡೆಸಿದರು.

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya
error: Content is protected !!