September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ.


ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ (2019) ಜಾರಿಗೆ ಬರಲಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕ್ರಮವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಜನರು ಈ ಕಾನೂನನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದರು.
ಚುನಾವಣಾ ಸೋಲಿನ ಭಯ ಮತ್ತು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದ ಚುನಾವಣಾ ಬಾಂಡ್ ಗಳಲ್ಲಿನ ಅಕ್ರಮಗಳಿಂದಾಗಿ ಜನರನ್ನು ವಿಭಜಿಸಲು ಮತ್ತು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಘೋಷಣೆ ಮಾಡುತ್ತಿರುವ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಆರೋಪಿಸಿದರು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಬಂಗೇರಕಟ್ಟೆ, ಪಣಕಜೆ, ಕಡವಿನ ಬಾಗಿಲು, ಕುದ್ರಡ್ಕ, ಅಂಡೆತಡ್ಕ, ಬಾಜಾರು, ಪೆರಲ್ದರ ಕಟ್ಟೆ, ಲಾಯಿಲ, ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯನಗರ ಕಡೆಗಳಲ್ಲಿ ಮಂಗಳವಾರ ರಾತ್ರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಹಾಗೂ CAA ವಿರುದ್ಧ ಘೋಷಣೆ ಕೂಗುವ ಮೂಲಕ ಎಸ್‌ಡಿಪಿಐ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ನಾಗರೀಕರು ಬೀದಿಗೆ ಬಂದು ಪ್ರತಿಭಟನೆ ನಡೆಸಿದರು.

Related posts

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!