25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ.

ಮಾ.13 ಸಂಜೆ 7ರಿಂದ ಭಜನಾ ಕಾರ್ಯಕ್ರಮ (ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೇಳದಪೇಟೆ ಇವರಿಂದ ) ರಾತ್ರಿ 8 ರಿಂದ ಶ್ರೀ ಪಂಚಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕೇಳದಪೇಟೆ ಇವರಿಂದ ಯಕ್ಷಗಾನ ಬಯಲಾಟ “ದಕ್ಷಯಜ್ಞ ” ನಡೆಯಲಿದೆ.
ಮಾ.14ರಂದು ಬೆಳಿಗ್ಗೆ 8ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ, ಬೆಳಿಗ್ಗೆ ಗಂಟೆ 7.00ರಿಂದ ಭಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಬಡಕೋಡಿ ಇವರಿಂದ, ಸಾಯಂಕಾಲ 8ರಿಂದ ವಿಜಯ್ ಕುಮಾರ್ ಜೈನ್ ಸಾರಥ್ಯದಲ್ಲಿ ಹಾಗೂ ತಂಡದವರಿಂದ ಗಾನ-ನೃತ್ಯ ವೈಭವ ನಡೆಯಲಿದೆ.
ಮಾ.15 ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಮಣಿಕಂಠ ಬಾಲ ಭಜನಾ ಮಂಡಳಿ ಪೆರಾಡಿ ಇವರಿಂದ ಸಂಜೆ ಗಂಟೆ 6ರಿಂದ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇದರಿಂದ ಯಕ್ಷಗಾನ ಬಯಲಾಟ ನೂತನ ಪ್ರಸಂಗ ನಡೆಯಲಿದೆ.
ಮಾ.16 ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂಡಳಿ ಸಾವ್ಯ ಇವರಿಂದ, ರಾತ್ರಿ ಗಂಟೆ 8.00ರಿಂದ ಪಿಂಗಾರ ಕಲಾವಿದರ್ ಬೆದ್ರ ಇವರಿಂದ ತುಳುನಾಟಕ ಕದಂಬ ನಡೆಯಲಿದೆ.
ಮಾ.17 ಸಂಜೆ 7ರಿಂದ ಭಜನ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕಾಶಿಪಟ್ಟ ಇವರಿಂದ ನಡೆಯಲಿದೆ.

Related posts

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!