July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ಇವರ ನೇತೃತ್ವದಲ್ಲಿ ಮಾ.14ರಿಂದ 19ರ ತನಕ ನಡೆಯಲಿದೆ ಎಂದು ಕೊಯ್ಯರುಗುತ್ತು ಅನುವಂಶಿಕ ಆಡಳಿತ ಮೊಕ್ತೇಸರರರು ಕೆ.ಬಿ. ಹರಿಶ್ಚಂದ್ರ ಬಲ್ಲಾಳ್ ಹಾಗೂ ಪ್ರಧಾನ ಆರ್ಚಕ ಕೆ.ಅಶೋಕ್ ಕುಮಾರ್ ಬಾಂಗಿಣ್ಣಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾ.14 ರಂದು ಬೆಳಿಗ್ಗೆ ಪ್ರಾರ್ಥನೆ, ಪ್ರಶ್ನಾಚಿಂತನೆ, ತೋರಣ ಮುಹೂರ್ತ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ ರಾತ್ರಿ ೮ರಿಂದ ಉತ್ಸವ, ಮಹಾಪೂಜೆ, ಬಲಿ ನಡೆಯಲಿದೆ. ಮಾ.15 ರಂದು ಬೆಳಗ್ಗೆ ಉತ್ಸವ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ 8 ರಿಂದ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ ನಡೆಯಲಿದೆ. ಮಾ.16ರಂದು ಬೆಳಗ್ಗೆ 9ರಿಂದ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ರಿಂದ ಕೊಟ್ಟಿಗೆ ಕೆಲಸ, ಮಹಾರಥೋತ್ಸವ, ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಶ್ರೀ ಉಮನಾಥ ದೇವಾಡಿಗ, ಅಶ್ವಥಪುರ ಮತ್ತು ಬಳಗದಿಂದ ನಾಗಸ್ವರ ವಾದನ ನಡೆಯಲಿದೆ.


ಮಾ.17 ರಂದು ಬೆಳಿಗ್ಗೆ 7 ರಿಂದ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ. 11ರಿಂದ ಶ್ರೀ ಚಂಡಿಕಾ ಯಾಗ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ,ಮಹಮ್ಮಾಯಿ ಗುಮ್ಮಟ ನೃತ್ಯ ನಡೆಯಲಿದೆ. ರಾತ್ರಿ 7ರಿಂದ ಬೆಳ್ತಂಗಡಿ ‘ಶೆಟ್ಟಿ ಆರ್ಟ್ಸ್’ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿಯ ನೃತ್ಯ ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ‘ಬರವುದ ಬೊಳ್ಳಿ’ ರಾಜೇಶ್ ಆಚಾರ್ಯ ಪರ್ಕಳ ವಿರಚಿತ ಏರ್ ತಾಂಕುವೆರ್” ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ ನಡೆಯಲಿದೆ. ಮಾ.18ಬೆಳಿಗ್ಗೆ 9ರಿಂದ ಕಲಶಾಭಿಷೇಕ, ಮಹಾಪೂಜೆ, ರಾತ್ರಿ ೬ರಿಂದ ಅವಕೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ ನಡೆಯಲಿದೆ. ಮಾ.19 ರಂದು ಸಂಪ್ರೋಕ್ಷಣೆ, ಮಹಾಪೂಜೆ. ಹಾಗೂ ಮಾ. 22 ರಂದು ಜಾತ್ರಾ ಪ್ರಯುಕ್ತ ಬಪ್ಪನಾಡು ಮೇಳದವರಿಂದ ‘ನಾಡೂರ ನಾಗಬನ’ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya
error: Content is protected !!