September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!