23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya
error: Content is protected !!