25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya
error: Content is protected !!