25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್ ರ ಸಹಾಯದಿಂದ ಅವರನ್ನು ಗುಂಡೂರಿಯ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾತ್ಕಾಲಿಕ ನೆಲೆಗೆ ವ್ಯವಸ್ಥೆ ಮಾಡಿದರು.

ಪೋಲಿಸರು ಈ ವಯೋವೃದ್ಧರ ಮಕ್ಕಳನ್ನು ಸಂಪರ್ಕಿಸಿ, ಮಾ.14ರಂದು ಇಂದು ವೇಣೂರು ಪೋಲೀಸ್ ಠಾಣೆಗೆ ಬಂದ ಮಗನಿಗೆ ಪೊಲೀಸರು ಬುದ್ಧಿವಾದ ಹೇಳಿ ಈ ವಯೋ ವೃದ್ಧ ತಂದೆಯನ್ನು ಮಗನ ಜತೆ ಕಳುಹಿಸಲಾಯಿತು.

ಕಿವಿ ಕೇಳದ ಈ ವಯೋವೃದ್ಧರಲ್ಲಿ ಸರಿಯಾದ ಮಾಹಿತಿ ತಿಳಿಯಲು ಹರಸಾಹಸ ಪಡೆಯಲಾಯಿತು.ಈ ಮೂಲಕ ಪೋಲೀಸರು ಮಗನ ಸಂಪರ್ಕ ವನ್ನು ಸಾಧಿಸಿ ಪೋಲೀಸ್ ಠಾಣೆಗೆ ಕರೆಯಿಸಿ ಸಾವ೯ಜನಿಕರ ಮೆಚ್ಚುಗೆಗೆ ಪಾತ್ರರಾದರು.

ವಯೋವೃದ್ಧ ಉಡುಪಿಯ ಶಂಕರನಾರಾಯಣ ಪೋಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು. ವಯೋ ಸಹಜ ಡಿಮೆನ್ಸಿಯಾ ರೋಗದಿಂದ ಬಳಲು ತಿದ್ದುರು. ಮನೆಯಲ್ಲಿ ನಿಲ್ಲದೆ ಊರೂರು ತಿರುಗುವ ಚಾಳಿ ಇದ್ದು.ಮರಗುಳಿತನವೂ ಇದೆ.

ಮಗನಿಗೆ ತಂದೆಯ ಹಸ್ತಾಂತರ ದ ಸಮಯ ರವೀಂದ್ರ ಅಮೀನ್ ಮತ್ತು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya
error: Content is protected !!