25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

ಗೇರುಕಟ್ಟೆ : ಇಲ್ಲಿಯ ಕಳಿಯ ಗ್ರಾಮದ ಸುಬರ್ನಿ ರವರ ಮನೆಯಲ್ಲಿ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿ ಯಾರೋ ಕಳ್ಳರು ಒಳಗೆ ನುಗ್ಗಿ ಸುಮಾರು ರೂ.46450 ಮೌಲ್ಯ ದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ.

ಕಳಿಯ ಗ್ರಾಮದ ಸುಬರ್ನಿ ಬಿರಾ ರವರು, ಜ.11. ರಿಂದ ಮಾ. 01ರವರೆಗೆ ಮನೆಯಿಂದ ಹೋಗಿದ್ದು ಇದರ ಮಧ್ಯೆ ಪತಿ ಉಮ್ಮರ್ ಫಾರೂಕ್ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಫೆ.29 ರಂದು ವಶಕ್ಕೆ ಪಡೆದಿದ್ದು ಈ ಮಾಹಿತಿಯನ್ನು ಪಿರ್ಯಾದಿದಾರರ ನೆರೆಕರೆಯವರು ದೂರವಾಣಿ ಮೂಲಕ ತಿಳಿಸಿದ್ದರು.
‌‌ಇದನ್ನು‌ ತಿಳಿದ ಸುಬರ್ನಿರವರು ಮಾ.02 ರಂದು ಮನೆಗೆ ಬಂದು ನೋಡಿದಾಗ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿದ್ದು ಅಲ್ಲದೇ ಮನೆಯಲ್ಲಿರುವ ಸೊತ್ತುಗಳಾದ, ಹೆಚ್ .ಪಿ ಕಂಪನಿಯ ಖಾಲಿ ಸಿಲೆಂಡರ್ -01 ಅಂದಾಜು ಮೌಲ್ಯ 4500/-, ಡಾ| ವಾಶ್ ಸೋಪ್-15 ಅಂದಾಜು ಮೌಲ್ಯ 600/-, ಲಿರ್ಲಾ ಸೊಪ್ -10 ಅಂದಾಜು ಮೌಲ್ಯ 550/-, 3 ಪವರ್ ಬ್ಯಾಂಕ್ ಅಂದಾಜು ಮೌಲ್ಯ ರೂ 4500/-, ಐ ಪೋನ್ ಏರ್ಪೋಡ್ -01 ಅಂದಾಜು ಮೌಲ್ಯ 26000/-, ಟೇಕ್ನೊ ಸ್ಮಾರ್ಟ್ ವಾಚ್ -01 ಅಂದಾಜು ಮೌಲ್ಯ 4500/-, ಡಕ್ -01 ಅಂದಾಜು ಮೌಲ್ಯ -450, ಕೋಳಿ 3-ಅಂದಾಜು ಮೌಲ್ಯ 1200/-, 2 ಟೀ ಶರ್ಟ್ ಅಂದಾಜು ಮೌಲ್ಯ ರೂ 800/-, ಮೊಬೈಲ್ ಚಾರ್ಚ್ ರ್ 03 ಅಂದಾಜು ಮೌಲ್ಯ ರೂ 950/, ಪರಪ್ಪು ದರ್ಗಾ ಬಾಕ್ಸ್ -1 ಅಂದಾಜು ಮೌಲ್ಯ 1200 ರೂ ಗುರುವಾಯನಕೆರೆ ದರ್ಗಾ ಬಾಕ್ಸ್ 01 ಅಂದಾಜು ಮೌಲ್ಯ 1200 ರೂ, ಆಗಿದ್ದು ಕಳವಾಗಿರುವ ಸೊತ್ತಿನ ಒಟ್ಟು ಮೌಲ್ಯ 46,450/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆ ಅ.ಕ್ರ ನಂ 34/2024 ಕಲಂ: 454,457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya
error: Content is protected !!