23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್ ರ ಸಹಾಯದಿಂದ ಅವರನ್ನು ಗುಂಡೂರಿಯ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾತ್ಕಾಲಿಕ ನೆಲೆಗೆ ವ್ಯವಸ್ಥೆ ಮಾಡಿದರು.

ಪೋಲಿಸರು ಈ ವಯೋವೃದ್ಧರ ಮಕ್ಕಳನ್ನು ಸಂಪರ್ಕಿಸಿ, ಮಾ.14ರಂದು ಇಂದು ವೇಣೂರು ಪೋಲೀಸ್ ಠಾಣೆಗೆ ಬಂದ ಮಗನಿಗೆ ಪೊಲೀಸರು ಬುದ್ಧಿವಾದ ಹೇಳಿ ಈ ವಯೋ ವೃದ್ಧ ತಂದೆಯನ್ನು ಮಗನ ಜತೆ ಕಳುಹಿಸಲಾಯಿತು.

ಕಿವಿ ಕೇಳದ ಈ ವಯೋವೃದ್ಧರಲ್ಲಿ ಸರಿಯಾದ ಮಾಹಿತಿ ತಿಳಿಯಲು ಹರಸಾಹಸ ಪಡೆಯಲಾಯಿತು.ಈ ಮೂಲಕ ಪೋಲೀಸರು ಮಗನ ಸಂಪರ್ಕ ವನ್ನು ಸಾಧಿಸಿ ಪೋಲೀಸ್ ಠಾಣೆಗೆ ಕರೆಯಿಸಿ ಸಾವ೯ಜನಿಕರ ಮೆಚ್ಚುಗೆಗೆ ಪಾತ್ರರಾದರು.

ವಯೋವೃದ್ಧ ಉಡುಪಿಯ ಶಂಕರನಾರಾಯಣ ಪೋಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು. ವಯೋ ಸಹಜ ಡಿಮೆನ್ಸಿಯಾ ರೋಗದಿಂದ ಬಳಲು ತಿದ್ದುರು. ಮನೆಯಲ್ಲಿ ನಿಲ್ಲದೆ ಊರೂರು ತಿರುಗುವ ಚಾಳಿ ಇದ್ದು.ಮರಗುಳಿತನವೂ ಇದೆ.

ಮಗನಿಗೆ ತಂದೆಯ ಹಸ್ತಾಂತರ ದ ಸಮಯ ರವೀಂದ್ರ ಅಮೀನ್ ಮತ್ತು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!