July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ ಮಾ.14ರಂದು ಗ್ರಾಮ ಪಂಚಾಯತ್ ಪ್ರೇರಣಾ ಸಂಜೀವಿನಿ ಸಭಾಂಗಣದಲ್ಲಿ ಶ್ರೀಮತಿ ಉಷಾಕಿರಣ್ ಕಾರಂತ್ ಇವರು ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಾನಿಧ್ಯ ಕೌಶಲ್ಯ ತರಭೇತಿ ಕೇಂದ್ರದ ಭಿನ್ನ ಸಾಮರ್ಥಯ ಉಳ್ಳ ಮಕ್ಕಳ ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಕಾರ್ಯಕ್ರಮದ ಮುಂದಕ್ಕೆ ಶ್ರೀಮತಿ ಉಷಾಕಿರಣ್ ಕಾರಂತ್ ಸಭೆಯನ್ನು ಉದ್ಘಾಟಿಸಿದರು. ತದನಂತರಸ ಸಭೆಯನ್ನು ಉದ್ದೇಶಿಸಿ ಸ್ವಾಗತವನ್ನು ಶ್ರೀ ಶ್ರವಣ್ ಕುಮಾರ್ ಕಾರ್ಯದರ್ಶಿ,ಗ್ರಾಮ ಪಂಚಾಯತ್ ಉಜಿರೆ ಇವರು ನೆರವೇರಿಸಿ ಸಭೆಗೆ ಬಂದಂತಹ ಪ್ರತಿಯೊಬ್ಬರಿಗೂ ಸಾನಿಧ್ಯ ಕೌಶಲ್ಯ ತರಭೇತಿ ಕೇಂದ್ರದ ಭಿನ್ನ ಸಾಮರ್ಥಯ ಉಳ್ಳ ಮಕ್ಕಳು ತಯಾರಿಸಿರುವ ಹೂ ಗುಚ್ಛವನ್ನು ನೀಡಿ ಸವ್ವಾಗತಿಸಲಾಯಿತು.

ಸಭೆಯನ್ನು ಅತ್ಯಂತ ಜವಬ್ದಾರಿ ವಹಿಸಿ ಆಯೋಜನೆಯನ್ನು ಮಾಡಿರುವ ಶ್ರೀ ವಿಪುಲ್ ಗ್ರಾಮೀಣ ಪುನರ್ವಸತಿ ಕಾರ್ಯ ಕರ್ತ ಗ್ರಾಮ ಪಂಚಾಯತ್ ಉಜಿರೆ ಇವರು ಕೂಡ ಸಭೇಯಲ್ಲಿ ಇದ್ದು ಪ್ರಸ್ತಾವನೆ ಹಾಗೂ ವಾರ್ಷಿಕ ವರದಿಯನ್ನು ಮಂಡಿಸಿದರು.

ಸಭೆಯನ್ನು ಉದ್ದೇಶಿಸಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ರವಿ ಕುಮಾರ್ ಬರಮೇಲು ಮುಖ್ಯ ಅತಿಥಿಯಾಗಿ ಮಾತಾಡಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದ್ಯಸ್ಯರು ಈ ಸಭೆಯಲ್ಲಿ ಭಾಗಿಯಾಗಿ ಎಲ್ಲರಿಗೂ ಶುಭ ಹಾರೈಸಿದರು. ತದನಂತರ ಸರಕಾರದಿಂದ ವಿಶೇಷ ಚೇತನರಿಗೆ ಸಿಗುವ ಎಲ್ಲಾ ಯೋಜನೆ ಹಾಗೂ ಅದನ್ನು ಪಡೆಯುವ ಬಗ್ಗೆ ಸಭೆಯ ಕೇದ್ರ ಬಿಂದುವಾಗಿ ಸಂಪೂರ್ಣ ಮಾಹಿತಿಯನ್ನು ಶ್ರೀ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ತಾಲೂಕು ವಿಕಲಚೇತನರ ಮೇಲ್ವಿಚಾರಕರು MRW ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ನೀಡಿದರು. ಇದರ ನಂತರ ಉಜಿರೆ ಗ್ರಾಮ ವ್ಯಾಪ್ತಿಯ ಮೂರು ಜನ ವಿಶೇಷ ಚೇತನರಾದ ವಿಶ್ವನಾಥ ರೈ,ವನಿತಾ,ಅವಿನಾಶ್ ಇವರುಗಳಿಗೆ ವೈಧ್ಯಕೀಯ ಸಹಾಯಧನ ಗ್ರಾಮ ಪಂಚಾಯತ್ ಅಧ್ಯಕ್ಷರು ನೀಡಿದರು ಹಾಗೂ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಓರ್ವ ವಿಶೇಷ ಚೇತನ ವಿಧ್ಯಾರ್ಥಿನಿಯಾದ ಶಮ ಇವಳಿಗೆ ಸೊಲಾರ್ ಬಾಲ್ಭ್ ಅಳವಡಿಸುವ ಸೆಟ್ಟ್ ನ್ನು ಅಧ್ಯಕ್ಷರು ಹಸ್ತಾಂತರಿಸಿದರು.

ಶ್ರೀಮತಿ ಪ್ರತೀಮಾ ಇವರು ಶಿಕ್ಷಣ ಮತ್ತು ಸಾಕ್ಷರತಾ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಶ್ರೀಮತಿ ವಿನೀಷ ಇವರು NGNREGA ಯ ಅಡಿಯಲ್ಲಿ ವಿಶೇಷ ಚೇತನರಿಗೆ ಇರುವ ಅವಕಾಶದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಭೆಯಲ್ಲಿ ಶ್ರೀಮತಿ ಮಲ್ಲಕಾ ಮೇಲ್ವಿಚಾರಕರು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ ಇವರು ಮುಖ್ಯ ಅಥಿತಿಯಾಗಿ ಬಾಗವಹಿಸಿ ವಿಶೇಷ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಹಾಗೂ ತಾಲೂಕಿನ ವಿವಿದ ಗ್ರಾಮ ಪಂಚಾಯತ್ ಗಳಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಆಗಮಿಸಿ ಕಾರ್ಯ ಕ್ರಮವನ್ನು ಚಂದ ಕಾಣಿಸುವಲ್ಲಿ ಯಶಸ್ವಿಯಾದರು. ಹಾಗೇ ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗದವರು ಕೂಡ ಈ ಗ್ರಾಮ ಸಭೆಯಲ್ಲಿ ಹಾಜರಿದ್ದರು. ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಹಾಗೆಯೆ ಆಶಾ, ಅಂಗನವಾಡಿ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತಿ ಇರುವುದಲ್ಲದೆ ವಿಶೇಷ ಚೇತನರ ಆರೋಗ್ಯ ದೃಷ್ಟಿಯಿಂದ ಒಟ್ಟು 37 ಜನ ವಿಶೇಷ ಚೇತನರ ಅರೋಗ್ಯ ತಪಾಸಣೆಯನ್ನು ವಿಶೇಷವಾಗಿ ಮಾಡಲಾಯಿತು.

ಈ ಸಂರ್ಭದಲ್ಲಿ ಶ್ರೀಮತಿ ಸುಜಾತಾ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಜಿರೆ ದಿನೇಶ್ ಸಮುದಾಯ ಆರೋಗ್ಯಾಧಿಕಾರಿ ಇವರು ಕೂಡ ಉಪಸ್ಥಿತಿ ಇದ್ದು ಸಭೆಯಲ್ಲಿ ಒಟ್ಟು 80 ಜನ ವಿಶೇಷ ಚೇತನರು ಹಾಜರಿದ್ದುಕೊಂಡು ಈ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಯಶಸ್ವಿಗೊಳಿಸಿದರು.

ಸಭೆಯ ನಿರೂಪಣೆಯನ್ನು ಕು/ತೇಜಸ್ವಿನಿ ಕೋಟ್ಯಾನ್ ಇವರು ನಡೆಸಿ ಸಭೆಯನ್ನು ಚಂದಕಾಣಿಸಿದರು ಮಾತ್ರವಲ್ಲ ಸಭೆಯಲ್ಲಿ SDM ಸ್ವಾಯುತ್ತ ಕಾಲೇಜಿನ ಸಮಾಜ ಶಾಸ್ತ ವಿಭಾಗದ ವಿಧ್ಯಾರ್ಥಿಗಳು ಕೂಡ ಉಪಸ್ಥಿತರಿದ್ದು ಸಹಕರಿಸಿದರು.

ಅಂತಿಮವಾಗಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಉದ್ದೇಶಿಸಿ ಅಧ್ಯಕ್ಷೀಯ ಬಾಷಣವನ್ನು ಶ್ರೀಮತಿ ಉಷಾಕಿರಣ್ ಕಾರಂತ್,ಅಧ್ಯಕ್ಷರು ಗ್ರಾಮ ಪಂಚಾಯತ್ ಉಜಿರೆ ಇವರು ನೆರೆವೇರಿಸಿ ಸಭೆಯನ್ನು ಕೊನೆಗೊಳಿಸುವ ಮುನ್ನ ಕಾರ್ಯಕ್ರಮದ ಧನ್ಯವಾದವನ್ನು ಶ್ರೀಮತಿ ಶಾಂತ LCRP ಪ್ರೇರಣ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಉಜಿರೆ ಇವರು ನೀಡಿದರು ಕೊನೆಗೆ ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya
error: Content is protected !!