23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

ಬೆಳ್ತಂಗಡಿ: ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಮಾ.13 ರಂದು ನಡೆದಿದೆ.
ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ‌. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ ಟ್ಯೂಷನ್ ಮುಗಿಸಿ ಬೈಕ್ ನಲ್ಲಿ ಕರೆದುಕೊಂಡು ಬರುವ ವೇಳೆ ರಸ್ತೆ ಮಧ್ಯದಲ್ಲಿ ಕಾಡಾನೆ ಎದುರಾಗಿದೆ.


ರಸ್ತೆಯ ತಿರುವಿನಲ್ಲಿ ಬೈಕ್ ಸವಾರನಿಗೆ ಸುಮಾರು 5 ಅಡಿ ಅಂತರದಲ್ಲಿ ಕಾಡಾನೆ ಕಂಡುಬಂದಿದ್ದು ಜತೆಯಲ್ಲಿ ಮಕ್ಕಳು ಇದ್ದ ಕಾರಣ ಸವಾರ ಸಂಪೂರ್ಣ ಕಂಗಲಾಗಿದ್ದಾರೆ. ರಸ್ತೆಯಲ್ಲಿ ತಿರುಗಾಡುತ್ತಿದ್ದ ಕಾಡಾನೆ ಕೊಂಚ ಸಮಯದ ಬಳಿಕ ಗುಡ್ಡದತ್ತ ತೆರಳಿತು.
ಇಲ್ಲಿಂದ ಮುಂದುವರಿದ ಕಾಡಾನೆ ಲಿಜೋ ಸ್ಕರಿಯ ಎಂಬವರ ತೋಟಕ್ಕೆ ನುಗ್ಗಿ ತೆಂಗಿನ ಮರ ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿದ್ದು, ಇಂದಬೆಟ್ಟಿನತ್ತ ತೆರಳಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.
-ಬೀದಿ ದೀಪ ಇಲ್ಲ-
ಮುಂಡಾಜೆ-ದಿಡುಪೆ ರಸ್ತೆಯು ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿದ್ದು ಇಲ್ಲಿ ಅಗತ್ಯ ಸ್ಥಳಗಳಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ.ಇಲ್ಲಿನ ಗ್ರಾಮಗಳಲ್ಲಿ ಕಾಡಾನೆ ಸಹಿತ ಹಲವು ವನ್ಯ ಮೃಗಗಳು ರಸ್ತೆಯುದ್ದಕ್ಕೂ ಸಂಚರಿಸುವುದು ಆಗಾಗ ನಡೆಯುತ್ತದೆ. ಬೀದಿ ದೀಪಗಳು ಉರಿಯುತ್ತಿದ್ದರೆ ಇವುಗಳ ಇರುವಿಕೆ ಕೊಂಚ ದೂರದಿಂದಲೇ ಕಂಡುಬರುತ್ತದೆ. ಆದರೆ ಇಲ್ಲಿ ಕೆಲವೆಡೆ ಬೀದಿ ದೀಪಗಳು ಇದ್ದರೂ ಅವು ಉರಿಯುತ್ತಿಲ್ಲ ಅವುಗಳನ್ನು ತಕ್ಷಣ ದುರಸ್ತಿಪಡಿಸಬೇಕು ಹಾಗೂ ಅಗತ್ಯ ಸ್ಥಳಗಳನ್ನು ಗುರುತಿಸಿ ಬೀದಿ ದೀಪಗಳನ್ನು ಅಳವಡಿಸುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya
error: Content is protected !!