July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಟಿ.ಬಿ.ಬಸವ ಲಿಂಗಪ್ಪ ಸಭೆಯನ್ನು ನಡೆಸಿಕೊಟ್ಟರು.

ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ,ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಮುಖ್ಯಸ್ಥರಾದ ಜಯಲಕ್ಷ್ಮಿ, ತಾಲೂಕು ಕಿರಿಯ ಅಭಿಯಂತರ ಗಫೂರು, ಚರಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಕಾಮಗಾರಿ ಬಗ್ಗೆ ಲೆಕ್ಕ ಪರಿಶೋಧನೆ ಸಮಿತಿ ಸದಸ್ಯರಿಗೆ ಹಾಗೂ ಪಂಚಾಯತು ಸದಸ್ಯರು, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ಮಜಲು,ಯಶೋಧರ ಶೆಟ್ಟಿ ಕೆ, ಅಬ್ದುಲ್ ಕರೀಂ ಕೆ.ಎಮ್, ಲತೀಫ್,ಸುಭಾಷಿಣಿ ಜನಾರ್ದನ ಗೌಡ ಕೆ, ಕುಸುಮ ಎನ್.ಬಂಗೇರ,ಮೋಹಿನಿ,ಮರೀಟಾ ಪಿಂಟೊ,ಪುಷ್ಪ ಹಾಗೂ ಗೇರುಕಟ್ಟೆ ಹಾಲು ಉ.ಸಂ.ಅಧ್ಯಕ್ಷ ಜನಾರ್ದನ ಗೌಡ ಕೆ,ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ,ಗುತ್ತಿಗೆದಾರ ನಿತೇಶ್, ಸ್ಥಳೀಯ ಗ್ರಾಮಸ್ಥರಾದ ರಾಘವ ಹೆಚ್,ಸತೀಶ್ ಭಂಡಾರಿ,ಹಿರಿಯರಾದ ಪೂವಪ್ಪ ಶೆಟ್ಟಿ, ಪಂಚಾಯತ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!