25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

ಗೇರುಕಟ್ಟೆ : ಇಲ್ಲಿಯ ಕಳಿಯ ಗ್ರಾಮದ ಸುಬರ್ನಿ ರವರ ಮನೆಯಲ್ಲಿ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿ ಯಾರೋ ಕಳ್ಳರು ಒಳಗೆ ನುಗ್ಗಿ ಸುಮಾರು ರೂ.46450 ಮೌಲ್ಯ ದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ.

ಕಳಿಯ ಗ್ರಾಮದ ಸುಬರ್ನಿ ಬಿರಾ ರವರು, ಜ.11. ರಿಂದ ಮಾ. 01ರವರೆಗೆ ಮನೆಯಿಂದ ಹೋಗಿದ್ದು ಇದರ ಮಧ್ಯೆ ಪತಿ ಉಮ್ಮರ್ ಫಾರೂಕ್ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಫೆ.29 ರಂದು ವಶಕ್ಕೆ ಪಡೆದಿದ್ದು ಈ ಮಾಹಿತಿಯನ್ನು ಪಿರ್ಯಾದಿದಾರರ ನೆರೆಕರೆಯವರು ದೂರವಾಣಿ ಮೂಲಕ ತಿಳಿಸಿದ್ದರು.
‌‌ಇದನ್ನು‌ ತಿಳಿದ ಸುಬರ್ನಿರವರು ಮಾ.02 ರಂದು ಮನೆಗೆ ಬಂದು ನೋಡಿದಾಗ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿದ್ದು ಅಲ್ಲದೇ ಮನೆಯಲ್ಲಿರುವ ಸೊತ್ತುಗಳಾದ, ಹೆಚ್ .ಪಿ ಕಂಪನಿಯ ಖಾಲಿ ಸಿಲೆಂಡರ್ -01 ಅಂದಾಜು ಮೌಲ್ಯ 4500/-, ಡಾ| ವಾಶ್ ಸೋಪ್-15 ಅಂದಾಜು ಮೌಲ್ಯ 600/-, ಲಿರ್ಲಾ ಸೊಪ್ -10 ಅಂದಾಜು ಮೌಲ್ಯ 550/-, 3 ಪವರ್ ಬ್ಯಾಂಕ್ ಅಂದಾಜು ಮೌಲ್ಯ ರೂ 4500/-, ಐ ಪೋನ್ ಏರ್ಪೋಡ್ -01 ಅಂದಾಜು ಮೌಲ್ಯ 26000/-, ಟೇಕ್ನೊ ಸ್ಮಾರ್ಟ್ ವಾಚ್ -01 ಅಂದಾಜು ಮೌಲ್ಯ 4500/-, ಡಕ್ -01 ಅಂದಾಜು ಮೌಲ್ಯ -450, ಕೋಳಿ 3-ಅಂದಾಜು ಮೌಲ್ಯ 1200/-, 2 ಟೀ ಶರ್ಟ್ ಅಂದಾಜು ಮೌಲ್ಯ ರೂ 800/-, ಮೊಬೈಲ್ ಚಾರ್ಚ್ ರ್ 03 ಅಂದಾಜು ಮೌಲ್ಯ ರೂ 950/, ಪರಪ್ಪು ದರ್ಗಾ ಬಾಕ್ಸ್ -1 ಅಂದಾಜು ಮೌಲ್ಯ 1200 ರೂ ಗುರುವಾಯನಕೆರೆ ದರ್ಗಾ ಬಾಕ್ಸ್ 01 ಅಂದಾಜು ಮೌಲ್ಯ 1200 ರೂ, ಆಗಿದ್ದು ಕಳವಾಗಿರುವ ಸೊತ್ತಿನ ಒಟ್ಟು ಮೌಲ್ಯ 46,450/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆ ಅ.ಕ್ರ ನಂ 34/2024 ಕಲಂ: 454,457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
error: Content is protected !!