28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾ.14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಚಾಲನೆ ನೀಡಿದರು. ಯುವಕ ಮಂಡಲದ ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿ ಇನ್ನಷ್ಟು ಸಮಾಜ ಕಾರ್ಯವು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಪಂಚಾಯತ್ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಭಾಯಿ, ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್, ಅಧ್ಯಕ್ಷರಾದ ನಿತಿನ್ ಮೋನಿಶ್, ಸಲಹೆಗಾರರಾದ ಡೀಕಯ್ಯ ಗೌಡ,ಕೇಶವ ಟೈಲರ್, ಶ್ಯಾಮರಾಯ ಆಚಾರ್ಯ ಕಾರ್ಯದರ್ಶಿ ವಿಗ್ನೇಶ್, ಮೆಸ್ಕಾಂ ಸಿಬ್ಬಂದಿ ಆನಂದ, ಬೆಳಾಲು ಸಿ.ಎ. ಬ್ಯಾಂಕ್ ನಿರ್ದೇಶಕರಾದ ವಿಜಯ ಗೌಡ,ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ವಾಹನ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಸದಸ್ಯರು, ಯುವಕ ಮಂಡಲ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಬೆಳಾಲು ಇದರ ಮುಖ್ಯ್ಯೊಪಾಧ್ಯಾಯರಾದ ಚಿದಾನಂದ ರವರು ಸ್ವಾಗತಿಸಿ, ಬೆಳಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಸುಲೈಮಾನ್ ಧನ್ಯವಾದವಿತ್ತರು.

Related posts

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!