25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾ.14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಚಾಲನೆ ನೀಡಿದರು. ಯುವಕ ಮಂಡಲದ ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿ ಇನ್ನಷ್ಟು ಸಮಾಜ ಕಾರ್ಯವು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಪಂಚಾಯತ್ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಭಾಯಿ, ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್, ಅಧ್ಯಕ್ಷರಾದ ನಿತಿನ್ ಮೋನಿಶ್, ಸಲಹೆಗಾರರಾದ ಡೀಕಯ್ಯ ಗೌಡ,ಕೇಶವ ಟೈಲರ್, ಶ್ಯಾಮರಾಯ ಆಚಾರ್ಯ ಕಾರ್ಯದರ್ಶಿ ವಿಗ್ನೇಶ್, ಮೆಸ್ಕಾಂ ಸಿಬ್ಬಂದಿ ಆನಂದ, ಬೆಳಾಲು ಸಿ.ಎ. ಬ್ಯಾಂಕ್ ನಿರ್ದೇಶಕರಾದ ವಿಜಯ ಗೌಡ,ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ವಾಹನ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಸದಸ್ಯರು, ಯುವಕ ಮಂಡಲ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಬೆಳಾಲು ಇದರ ಮುಖ್ಯ್ಯೊಪಾಧ್ಯಾಯರಾದ ಚಿದಾನಂದ ರವರು ಸ್ವಾಗತಿಸಿ, ಬೆಳಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಸುಲೈಮಾನ್ ಧನ್ಯವಾದವಿತ್ತರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya
error: Content is protected !!