24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

ಗೇರುಕಟ್ಟೆ : ಇಲ್ಲಿಯ ಕಳಿಯ ಗ್ರಾಮದ ಸುಬರ್ನಿ ರವರ ಮನೆಯಲ್ಲಿ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿ ಯಾರೋ ಕಳ್ಳರು ಒಳಗೆ ನುಗ್ಗಿ ಸುಮಾರು ರೂ.46450 ಮೌಲ್ಯ ದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ.

ಕಳಿಯ ಗ್ರಾಮದ ಸುಬರ್ನಿ ಬಿರಾ ರವರು, ಜ.11. ರಿಂದ ಮಾ. 01ರವರೆಗೆ ಮನೆಯಿಂದ ಹೋಗಿದ್ದು ಇದರ ಮಧ್ಯೆ ಪತಿ ಉಮ್ಮರ್ ಫಾರೂಕ್ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಫೆ.29 ರಂದು ವಶಕ್ಕೆ ಪಡೆದಿದ್ದು ಈ ಮಾಹಿತಿಯನ್ನು ಪಿರ್ಯಾದಿದಾರರ ನೆರೆಕರೆಯವರು ದೂರವಾಣಿ ಮೂಲಕ ತಿಳಿಸಿದ್ದರು.
‌‌ಇದನ್ನು‌ ತಿಳಿದ ಸುಬರ್ನಿರವರು ಮಾ.02 ರಂದು ಮನೆಗೆ ಬಂದು ನೋಡಿದಾಗ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿದ್ದು ಅಲ್ಲದೇ ಮನೆಯಲ್ಲಿರುವ ಸೊತ್ತುಗಳಾದ, ಹೆಚ್ .ಪಿ ಕಂಪನಿಯ ಖಾಲಿ ಸಿಲೆಂಡರ್ -01 ಅಂದಾಜು ಮೌಲ್ಯ 4500/-, ಡಾ| ವಾಶ್ ಸೋಪ್-15 ಅಂದಾಜು ಮೌಲ್ಯ 600/-, ಲಿರ್ಲಾ ಸೊಪ್ -10 ಅಂದಾಜು ಮೌಲ್ಯ 550/-, 3 ಪವರ್ ಬ್ಯಾಂಕ್ ಅಂದಾಜು ಮೌಲ್ಯ ರೂ 4500/-, ಐ ಪೋನ್ ಏರ್ಪೋಡ್ -01 ಅಂದಾಜು ಮೌಲ್ಯ 26000/-, ಟೇಕ್ನೊ ಸ್ಮಾರ್ಟ್ ವಾಚ್ -01 ಅಂದಾಜು ಮೌಲ್ಯ 4500/-, ಡಕ್ -01 ಅಂದಾಜು ಮೌಲ್ಯ -450, ಕೋಳಿ 3-ಅಂದಾಜು ಮೌಲ್ಯ 1200/-, 2 ಟೀ ಶರ್ಟ್ ಅಂದಾಜು ಮೌಲ್ಯ ರೂ 800/-, ಮೊಬೈಲ್ ಚಾರ್ಚ್ ರ್ 03 ಅಂದಾಜು ಮೌಲ್ಯ ರೂ 950/, ಪರಪ್ಪು ದರ್ಗಾ ಬಾಕ್ಸ್ -1 ಅಂದಾಜು ಮೌಲ್ಯ 1200 ರೂ ಗುರುವಾಯನಕೆರೆ ದರ್ಗಾ ಬಾಕ್ಸ್ 01 ಅಂದಾಜು ಮೌಲ್ಯ 1200 ರೂ, ಆಗಿದ್ದು ಕಳವಾಗಿರುವ ಸೊತ್ತಿನ ಒಟ್ಟು ಮೌಲ್ಯ 46,450/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆ ಅ.ಕ್ರ ನಂ 34/2024 ಕಲಂ: 454,457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ