ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Leave a Comment

error: Content is protected !!