April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾ.14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಚಾಲನೆ ನೀಡಿದರು. ಯುವಕ ಮಂಡಲದ ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿ ಇನ್ನಷ್ಟು ಸಮಾಜ ಕಾರ್ಯವು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಪಂಚಾಯತ್ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಭಾಯಿ, ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್, ಅಧ್ಯಕ್ಷರಾದ ನಿತಿನ್ ಮೋನಿಶ್, ಸಲಹೆಗಾರರಾದ ಡೀಕಯ್ಯ ಗೌಡ,ಕೇಶವ ಟೈಲರ್, ಶ್ಯಾಮರಾಯ ಆಚಾರ್ಯ ಕಾರ್ಯದರ್ಶಿ ವಿಗ್ನೇಶ್, ಮೆಸ್ಕಾಂ ಸಿಬ್ಬಂದಿ ಆನಂದ, ಬೆಳಾಲು ಸಿ.ಎ. ಬ್ಯಾಂಕ್ ನಿರ್ದೇಶಕರಾದ ವಿಜಯ ಗೌಡ,ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ವಾಹನ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಸದಸ್ಯರು, ಯುವಕ ಮಂಡಲ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಬೆಳಾಲು ಇದರ ಮುಖ್ಯ್ಯೊಪಾಧ್ಯಾಯರಾದ ಚಿದಾನಂದ ರವರು ಸ್ವಾಗತಿಸಿ, ಬೆಳಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಸುಲೈಮಾನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya
error: Content is protected !!