ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾ.14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಚಾಲನೆ ನೀಡಿದರು. ಯುವಕ ಮಂಡಲದ ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿ ಇನ್ನಷ್ಟು ಸಮಾಜ ಕಾರ್ಯವು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಪಂಚಾಯತ್ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಭಾಯಿ, ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್, ಅಧ್ಯಕ್ಷರಾದ ನಿತಿನ್ ಮೋನಿಶ್, ಸಲಹೆಗಾರರಾದ ಡೀಕಯ್ಯ ಗೌಡ,ಕೇಶವ ಟೈಲರ್, ಶ್ಯಾಮರಾಯ ಆಚಾರ್ಯ ಕಾರ್ಯದರ್ಶಿ ವಿಗ್ನೇಶ್, ಮೆಸ್ಕಾಂ ಸಿಬ್ಬಂದಿ ಆನಂದ, ಬೆಳಾಲು ಸಿ.ಎ. ಬ್ಯಾಂಕ್ ನಿರ್ದೇಶಕರಾದ ವಿಜಯ ಗೌಡ,ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ವಾಹನ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಸದಸ್ಯರು, ಯುವಕ ಮಂಡಲ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಬೆಳಾಲು ಇದರ ಮುಖ್ಯ್ಯೊಪಾಧ್ಯಾಯರಾದ ಚಿದಾನಂದ ರವರು ಸ್ವಾಗತಿಸಿ, ಬೆಳಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಸುಲೈಮಾನ್ ಧನ್ಯವಾದವಿತ್ತರು.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya
error: Content is protected !!