25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ, ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್, ಕಿರಿಯ ಆರೋಗ್ಯ ಸಹಾಯಕಿ ನಿಖಿತಾ ಮತ್ತು ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ವೀಣಾ, ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

ಜಯಶ್ರೀ ನಿರೂಪಿಸಿ ಹಾಗೂ ಸ್ವಾಗತವನ್ನು ಜನನಿ ಸಂಜೀವಿನಿ ಒಕ್ಕೂಟದ MBK ವಿಮಲರವರು ಮಾಡಿದರು.ಪ್ರಾರ್ಥನೆಯನ್ನು ಜಯಶ್ರೀ ಜನನಿ ಸಂಜೀವಿನಿ ಕಾರ್ಯದರ್ಶಿ ಮಾಡಿದರು.ಸದಸ್ಯರಿಗೆ ಆಟೋಟ ಸ್ಪರ್ದೆಯನ್ನು ನಡೆಸಲಾಯಿತು.

ನಾರಿಶಕ್ತಿ ಸನ್ಮಾನವನ್ನು ಸಂಘದ 3 ಸದಸ್ಯರಿಗೆ ಮಾಡಲಾಯಿತು.ದಿವ್ಯಜೋತಿ ಸ್ತ್ರಿ ಶಕ್ತಿಯ ಭವಾನಿ ಇವರಿಗೆ ಕೋಳಿ ಸಾಕಣಿಗೆ ಶ್ರೀ ದುರ್ಗಾ ಸಂಜೀವಿನಿ ಸದಸ್ಯೆಯಾದ ಕವಿತಾ ಇವರಿಗೆ ಆಡು ಸಾಕಣಿಕೆ ಹಾಗೂ ಸುಜ್ಞಾನ ವಿಶೇಷ ಚೇತನರ ಸ್ವ ಸಹಾಯ ಸಂಘದ ಸದಸ್ಯ ಸೌರಭ ಇವರಿಗೆ ಸನ್ಮಾನಿಸಲಾಯಿತು.

ಸುಶೀಲ ಮಾ.ತಾ.ಸ, ಗೀತಾ ಶಾರದ ಮಾ.ಗ್ರಾ.ಪಂ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರುಗಳು ಒಕ್ಕೂಟದ ಪದಾಧಿಕಾರಿಗಳು, LCRP ಗಳು, ಕೃಷಿ ಸಖಿ, ಪಶುಸಖಿ, ಮಹಿಳಾ ಸಂಘದ ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲ ಎನ್ ಇವರು ಭಾಗವಹಿಸಿದರು. ಗೀತಾ ಧನ್ಯವಾದವಿತ್ತರು .

Related posts

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!