23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ, ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್, ಕಿರಿಯ ಆರೋಗ್ಯ ಸಹಾಯಕಿ ನಿಖಿತಾ ಮತ್ತು ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ವೀಣಾ, ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

ಜಯಶ್ರೀ ನಿರೂಪಿಸಿ ಹಾಗೂ ಸ್ವಾಗತವನ್ನು ಜನನಿ ಸಂಜೀವಿನಿ ಒಕ್ಕೂಟದ MBK ವಿಮಲರವರು ಮಾಡಿದರು.ಪ್ರಾರ್ಥನೆಯನ್ನು ಜಯಶ್ರೀ ಜನನಿ ಸಂಜೀವಿನಿ ಕಾರ್ಯದರ್ಶಿ ಮಾಡಿದರು.ಸದಸ್ಯರಿಗೆ ಆಟೋಟ ಸ್ಪರ್ದೆಯನ್ನು ನಡೆಸಲಾಯಿತು.

ನಾರಿಶಕ್ತಿ ಸನ್ಮಾನವನ್ನು ಸಂಘದ 3 ಸದಸ್ಯರಿಗೆ ಮಾಡಲಾಯಿತು.ದಿವ್ಯಜೋತಿ ಸ್ತ್ರಿ ಶಕ್ತಿಯ ಭವಾನಿ ಇವರಿಗೆ ಕೋಳಿ ಸಾಕಣಿಗೆ ಶ್ರೀ ದುರ್ಗಾ ಸಂಜೀವಿನಿ ಸದಸ್ಯೆಯಾದ ಕವಿತಾ ಇವರಿಗೆ ಆಡು ಸಾಕಣಿಕೆ ಹಾಗೂ ಸುಜ್ಞಾನ ವಿಶೇಷ ಚೇತನರ ಸ್ವ ಸಹಾಯ ಸಂಘದ ಸದಸ್ಯ ಸೌರಭ ಇವರಿಗೆ ಸನ್ಮಾನಿಸಲಾಯಿತು.

ಸುಶೀಲ ಮಾ.ತಾ.ಸ, ಗೀತಾ ಶಾರದ ಮಾ.ಗ್ರಾ.ಪಂ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರುಗಳು ಒಕ್ಕೂಟದ ಪದಾಧಿಕಾರಿಗಳು, LCRP ಗಳು, ಕೃಷಿ ಸಖಿ, ಪಶುಸಖಿ, ಮಹಿಳಾ ಸಂಘದ ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲ ಎನ್ ಇವರು ಭಾಗವಹಿಸಿದರು. ಗೀತಾ ಧನ್ಯವಾದವಿತ್ತರು .

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
error: Content is protected !!