30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

ನ್ಯಾಯತರ್ಪು : ಇಲ್ಲಿಯ ಜಾರಿಗೆಬೈಲು ಸಮೀಪದ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುವ ಮೂಲಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು, ನಜ್ಜು-ಗುಜ್ಜಾದ ಘಟನೆ ಮಾ.15 ರಂದು ಸಂಜೆ ನಡೆಯಿತು.

ಕೆಎ.20 ಎಮ್.ಎ.2965 ಉಡುಪಿ ಮೂಲದ ಹೋಲ್ ಸೇಲ್ ಮತ್ತು ರಿಟೈಲರ್ ವ್ಯಾಪಾರದ ವ್ಯಕ್ತಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಓರ್ವ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು ಸ್ಥಳೀಯರು 108 ಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ನಿಲ್ಲಿಸಿದಂತೆ ಕಾಣುವ ದೃಶ್ಯವನ್ನು ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ. ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು,ವಾಹನಗಳ ಸಂಚಾರಕ್ಕೆ ಸಹಕರಿಸಿದರು.

Related posts

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya
error: Content is protected !!