24.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಷನ್, ಬೆಂಗಳೂರು‌ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ಉದ್ಯಮಿಗಳಿಗಾಗಿ “ಸಮೃದ್ಧಿ-ಸಂತೃಪ್ತಿ ಸಬಲೀಕರಣ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಮಾ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಬೆಳಗ್ಗೆ 9:00 ಗಂಟೆಗೆ ಆರಂಭವಾಗಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.‌ಕೆ.ಡಿ.ಆ‌ರ್.ಡಿ.ಪಿ.)ಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಡಾ. ಹೇಮಾವತಿ ವಿ. ಹೆಗ್ಗಡೆ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೆಲ್ಕೋದ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಹರೀಶ್‌ ಹಂದೆ, ಸ್ವಾಮಿ ವಿವೇಕಾನಂದ ಯೂತ್‌ ಮೂವ್ಮೆಂಟ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಸವಿತಾ ಸುಳುಗೋಡು‌, ಎಸ್.‌ಕೆ.ಡಿ.ಆ‌ರ್.ಡಿ.ಪಿ.ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಚ್.ಎಲ್‌. ಮಂಜುನಾಥ್‌, ಸೆಲ್ಕೋ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಮೋಹನ್‌ ಭಾಸ್ಕರ್‌ ಹೆಗಡೆ, ಎಸ್.‌ಕೆ.ಡಿ.ಆ‌ರ್.ಡಿ.ಪಿ.ಯ ಮುಖ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಅನಿಲ್‌ ಕುಮಾರ್‌ ಎಸ್.ಎಲ್.‌, ಭಾಗವಹಿಸುವರು.

ಕಾರ್ಯಕ್ರಮದಲ್ಲಿ, ಗ್ರಾಮೀಣ ಪ್ರದೇಶಗಳ ದೃಷ್ಟಿಯಲ್ಲಿ ಉದ್ಯಮಶೀಲತೆ – ಅವಕಾಶಗಳು ಮತ್ತು ಸವಾಲುಗಳು
ಹಾಗೂ ಸುಸ್ಥಿರ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಉದ್ಯಮವನ್ನು ನಡೆಸುತ್ತಿರುವ ಮಹಿಳಾ ಸಾಧಕರಿಂದ ಅನುಭವಗಳ ಪ್ರಸ್ತುತಿ ಎಂಬ ವಿಷಯಗಳ ಕುರಿತು ಎರಡು ವಿಚಾರಗೋಷ್ಠಿಗಳು ನಡೆಯಲಿವೆ.

Related posts

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!