23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya
error: Content is protected !!