September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya
error: Content is protected !!