23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya
error: Content is protected !!