July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇವುಗಳ ಸಹಭಾಗಿತ್ವದಲ್ಲಿ ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರ ದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಫಿಟ್ ಇಂಡಿಯಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿಖಿತಾ ಜೈಸನ್ ಸಮುದಾಯ ಆರೋಗ್ಯ ಅಧಿಕಾರಿ ಇವರು ಈ ಕಾರ್ಯಕ್ರಮದಲ್ಲಿ ಮಾರಕ ರೋಗ ಕ್ಯಾನ್ಸರ್ ನ ಬಗ್ಗೆ ಅರಿವು ಮೂಡಿಸಿ. ಅದನ್ನು ತಡೆಗಟ್ಟಬಹುದಾದ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಜೆ ಸಿ ಐ ಕೊಕ್ಕಡ ಕಪಿಲ ಘಟಕವು ಈ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದ ಪ್ರಯುಕ್ತ ನಿವೃತ್ತ ಅಂಗನವಾಡಿ ಶಿಕ್ಷಕಿ ಪಿಟಿ ಎಲ್ಲಿಯಮ್ಮ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ನಿಕಿತಾ ಜೈಸನ್ ರವರನ್ನು ಘಟಕದ ವತಿಯಿಂದ ಗುರುತಿಸಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್. ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆ ಸಿ ಜಿತೇಶ್ ಎಲ್ ಪಿರೇರಾ, ಯೋಜನೆ ನಿರ್ದೇಶಕರಾದ ಜೆ ಸಿ ಪ್ರಿಯಾ ಜೆ ಅಮಿನ್, ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ. ಶ್ರೀಧರ್ ರಾವ್, ಘಟಕದ ಮಾರ್ಗದರ್ಶಕರಾದ ಜೆ ಸಿ ಎಚ್ ಜಿ ಎಫ್ ಜೋಸೆಫ್ ಪೀರೇರ, ಕೋಶಾಧಿಕಾರಿ ಜೆ ಸಿ ವಿದ್ಯೆಂದ್ರ ಎಸ್, ಬೆಲ್ಲಾರೆ ಜೆಸಿ ಘಟಕದ ಸದಸ್ಯರಾದ ಜೆಸಿ ಸೀತಾರಾಮ್ ರೈ, ಆಶಾ ಕಾರ್ಯಕರ್ತೆರಾದ ಶ್ರೀಮತಿ ಪುಷ್ಪ ಕೆ ಗುಂಡಿಗೆದ್ದೆ, ಶ್ರೀಮತಿ ರೇವತಿ ಬಟ್ಯಾಲ್, ಶ್ರೀ ಶಕ್ತಿ ಸಂಘದ ಸರ್ವ ಸದಸ್ಯರು ಹಾಗೂ ಅಂಗನವಾಡಿ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿ ವಾಣಿ ಯನ್ನು ಅನ್ಸಿಲ್ಲಾ ರೋಶ್ನಿ ರೋಡ್ರಿ ಗಸ್ ವಾಚಿಸಿದರು. ಜೆ ಸಿ ಎಚ್ ಜಿ ಎಫ್ ಸಂತೋಷ್ ಸ್ವಾಗತಿಸಿ. ಜೆಸಿ ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!