27.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.14 ರಂದು ಮೀನ ಸಂಕ್ರಮಣದಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಿತು.

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ ; ಕಿಶು ಪೆರಿಂಜೆ

Related posts

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ