July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.14 ರಂದು ಮೀನ ಸಂಕ್ರಮಣದಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಿತು.

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ ; ಕಿಶು ಪೆರಿಂಜೆ

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya
error: Content is protected !!