22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ, ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್, ಕಿರಿಯ ಆರೋಗ್ಯ ಸಹಾಯಕಿ ನಿಖಿತಾ ಮತ್ತು ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ವೀಣಾ, ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

ಜಯಶ್ರೀ ನಿರೂಪಿಸಿ ಹಾಗೂ ಸ್ವಾಗತವನ್ನು ಜನನಿ ಸಂಜೀವಿನಿ ಒಕ್ಕೂಟದ MBK ವಿಮಲರವರು ಮಾಡಿದರು.ಪ್ರಾರ್ಥನೆಯನ್ನು ಜಯಶ್ರೀ ಜನನಿ ಸಂಜೀವಿನಿ ಕಾರ್ಯದರ್ಶಿ ಮಾಡಿದರು.ಸದಸ್ಯರಿಗೆ ಆಟೋಟ ಸ್ಪರ್ದೆಯನ್ನು ನಡೆಸಲಾಯಿತು.

ನಾರಿಶಕ್ತಿ ಸನ್ಮಾನವನ್ನು ಸಂಘದ 3 ಸದಸ್ಯರಿಗೆ ಮಾಡಲಾಯಿತು.ದಿವ್ಯಜೋತಿ ಸ್ತ್ರಿ ಶಕ್ತಿಯ ಭವಾನಿ ಇವರಿಗೆ ಕೋಳಿ ಸಾಕಣಿಗೆ ಶ್ರೀ ದುರ್ಗಾ ಸಂಜೀವಿನಿ ಸದಸ್ಯೆಯಾದ ಕವಿತಾ ಇವರಿಗೆ ಆಡು ಸಾಕಣಿಕೆ ಹಾಗೂ ಸುಜ್ಞಾನ ವಿಶೇಷ ಚೇತನರ ಸ್ವ ಸಹಾಯ ಸಂಘದ ಸದಸ್ಯ ಸೌರಭ ಇವರಿಗೆ ಸನ್ಮಾನಿಸಲಾಯಿತು.

ಸುಶೀಲ ಮಾ.ತಾ.ಸ, ಗೀತಾ ಶಾರದ ಮಾ.ಗ್ರಾ.ಪಂ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರುಗಳು ಒಕ್ಕೂಟದ ಪದಾಧಿಕಾರಿಗಳು, LCRP ಗಳು, ಕೃಷಿ ಸಖಿ, ಪಶುಸಖಿ, ಮಹಿಳಾ ಸಂಘದ ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲ ಎನ್ ಇವರು ಭಾಗವಹಿಸಿದರು. ಗೀತಾ ಧನ್ಯವಾದವಿತ್ತರು .

Related posts

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya
error: Content is protected !!