23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ, ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್, ಕಿರಿಯ ಆರೋಗ್ಯ ಸಹಾಯಕಿ ನಿಖಿತಾ ಮತ್ತು ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ವೀಣಾ, ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

ಜಯಶ್ರೀ ನಿರೂಪಿಸಿ ಹಾಗೂ ಸ್ವಾಗತವನ್ನು ಜನನಿ ಸಂಜೀವಿನಿ ಒಕ್ಕೂಟದ MBK ವಿಮಲರವರು ಮಾಡಿದರು.ಪ್ರಾರ್ಥನೆಯನ್ನು ಜಯಶ್ರೀ ಜನನಿ ಸಂಜೀವಿನಿ ಕಾರ್ಯದರ್ಶಿ ಮಾಡಿದರು.ಸದಸ್ಯರಿಗೆ ಆಟೋಟ ಸ್ಪರ್ದೆಯನ್ನು ನಡೆಸಲಾಯಿತು.

ನಾರಿಶಕ್ತಿ ಸನ್ಮಾನವನ್ನು ಸಂಘದ 3 ಸದಸ್ಯರಿಗೆ ಮಾಡಲಾಯಿತು.ದಿವ್ಯಜೋತಿ ಸ್ತ್ರಿ ಶಕ್ತಿಯ ಭವಾನಿ ಇವರಿಗೆ ಕೋಳಿ ಸಾಕಣಿಗೆ ಶ್ರೀ ದುರ್ಗಾ ಸಂಜೀವಿನಿ ಸದಸ್ಯೆಯಾದ ಕವಿತಾ ಇವರಿಗೆ ಆಡು ಸಾಕಣಿಕೆ ಹಾಗೂ ಸುಜ್ಞಾನ ವಿಶೇಷ ಚೇತನರ ಸ್ವ ಸಹಾಯ ಸಂಘದ ಸದಸ್ಯ ಸೌರಭ ಇವರಿಗೆ ಸನ್ಮಾನಿಸಲಾಯಿತು.

ಸುಶೀಲ ಮಾ.ತಾ.ಸ, ಗೀತಾ ಶಾರದ ಮಾ.ಗ್ರಾ.ಪಂ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರುಗಳು ಒಕ್ಕೂಟದ ಪದಾಧಿಕಾರಿಗಳು, LCRP ಗಳು, ಕೃಷಿ ಸಖಿ, ಪಶುಸಖಿ, ಮಹಿಳಾ ಸಂಘದ ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲ ಎನ್ ಇವರು ಭಾಗವಹಿಸಿದರು. ಗೀತಾ ಧನ್ಯವಾದವಿತ್ತರು .

Related posts

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya
error: Content is protected !!