ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

ನ್ಯಾಯತರ್ಪು : ಇಲ್ಲಿಯ ಜಾರಿಗೆಬೈಲು ಸಮೀಪದ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುವ ಮೂಲಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು, ನಜ್ಜು-ಗುಜ್ಜಾದ ಘಟನೆ ಮಾ.15 ರಂದು ಸಂಜೆ ನಡೆಯಿತು.

ಕೆಎ.20 ಎಮ್.ಎ.2965 ಉಡುಪಿ ಮೂಲದ ಹೋಲ್ ಸೇಲ್ ಮತ್ತು ರಿಟೈಲರ್ ವ್ಯಾಪಾರದ ವ್ಯಕ್ತಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಓರ್ವ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು ಸ್ಥಳೀಯರು 108 ಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ನಿಲ್ಲಿಸಿದಂತೆ ಕಾಣುವ ದೃಶ್ಯವನ್ನು ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ. ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು,ವಾಹನಗಳ ಸಂಚಾರಕ್ಕೆ ಸಹಕರಿಸಿದರು.

Related posts

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆ

Suddi Udaya
error: Content is protected !!