26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

ನ್ಯಾಯತರ್ಪು : ಇಲ್ಲಿಯ ಜಾರಿಗೆಬೈಲು ಸಮೀಪದ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುವ ಮೂಲಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು, ನಜ್ಜು-ಗುಜ್ಜಾದ ಘಟನೆ ಮಾ.15 ರಂದು ಸಂಜೆ ನಡೆಯಿತು.

ಕೆಎ.20 ಎಮ್.ಎ.2965 ಉಡುಪಿ ಮೂಲದ ಹೋಲ್ ಸೇಲ್ ಮತ್ತು ರಿಟೈಲರ್ ವ್ಯಾಪಾರದ ವ್ಯಕ್ತಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಓರ್ವ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು ಸ್ಥಳೀಯರು 108 ಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ನಿಲ್ಲಿಸಿದಂತೆ ಕಾಣುವ ದೃಶ್ಯವನ್ನು ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ. ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು,ವಾಹನಗಳ ಸಂಚಾರಕ್ಕೆ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!