22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಷನ್, ಬೆಂಗಳೂರು‌ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ಉದ್ಯಮಿಗಳಿಗಾಗಿ “ಸಮೃದ್ಧಿ-ಸಂತೃಪ್ತಿ ಸಬಲೀಕರಣ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಮಾ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಬೆಳಗ್ಗೆ 9:00 ಗಂಟೆಗೆ ಆರಂಭವಾಗಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.‌ಕೆ.ಡಿ.ಆ‌ರ್.ಡಿ.ಪಿ.)ಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಡಾ. ಹೇಮಾವತಿ ವಿ. ಹೆಗ್ಗಡೆ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೆಲ್ಕೋದ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಹರೀಶ್‌ ಹಂದೆ, ಸ್ವಾಮಿ ವಿವೇಕಾನಂದ ಯೂತ್‌ ಮೂವ್ಮೆಂಟ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಸವಿತಾ ಸುಳುಗೋಡು‌, ಎಸ್.‌ಕೆ.ಡಿ.ಆ‌ರ್.ಡಿ.ಪಿ.ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಚ್.ಎಲ್‌. ಮಂಜುನಾಥ್‌, ಸೆಲ್ಕೋ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಮೋಹನ್‌ ಭಾಸ್ಕರ್‌ ಹೆಗಡೆ, ಎಸ್.‌ಕೆ.ಡಿ.ಆ‌ರ್.ಡಿ.ಪಿ.ಯ ಮುಖ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಅನಿಲ್‌ ಕುಮಾರ್‌ ಎಸ್.ಎಲ್.‌, ಭಾಗವಹಿಸುವರು.

ಕಾರ್ಯಕ್ರಮದಲ್ಲಿ, ಗ್ರಾಮೀಣ ಪ್ರದೇಶಗಳ ದೃಷ್ಟಿಯಲ್ಲಿ ಉದ್ಯಮಶೀಲತೆ – ಅವಕಾಶಗಳು ಮತ್ತು ಸವಾಲುಗಳು
ಹಾಗೂ ಸುಸ್ಥಿರ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಉದ್ಯಮವನ್ನು ನಡೆಸುತ್ತಿರುವ ಮಹಿಳಾ ಸಾಧಕರಿಂದ ಅನುಭವಗಳ ಪ್ರಸ್ತುತಿ ಎಂಬ ವಿಷಯಗಳ ಕುರಿತು ಎರಡು ವಿಚಾರಗೋಷ್ಠಿಗಳು ನಡೆಯಲಿವೆ.

Related posts

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya
error: Content is protected !!