April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!