July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya
error: Content is protected !!