25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya
error: Content is protected !!