September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!