25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇವುಗಳ ಸಹಭಾಗಿತ್ವದಲ್ಲಿ ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರ ದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಫಿಟ್ ಇಂಡಿಯಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿಖಿತಾ ಜೈಸನ್ ಸಮುದಾಯ ಆರೋಗ್ಯ ಅಧಿಕಾರಿ ಇವರು ಈ ಕಾರ್ಯಕ್ರಮದಲ್ಲಿ ಮಾರಕ ರೋಗ ಕ್ಯಾನ್ಸರ್ ನ ಬಗ್ಗೆ ಅರಿವು ಮೂಡಿಸಿ. ಅದನ್ನು ತಡೆಗಟ್ಟಬಹುದಾದ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಜೆ ಸಿ ಐ ಕೊಕ್ಕಡ ಕಪಿಲ ಘಟಕವು ಈ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದ ಪ್ರಯುಕ್ತ ನಿವೃತ್ತ ಅಂಗನವಾಡಿ ಶಿಕ್ಷಕಿ ಪಿಟಿ ಎಲ್ಲಿಯಮ್ಮ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ನಿಕಿತಾ ಜೈಸನ್ ರವರನ್ನು ಘಟಕದ ವತಿಯಿಂದ ಗುರುತಿಸಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್. ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆ ಸಿ ಜಿತೇಶ್ ಎಲ್ ಪಿರೇರಾ, ಯೋಜನೆ ನಿರ್ದೇಶಕರಾದ ಜೆ ಸಿ ಪ್ರಿಯಾ ಜೆ ಅಮಿನ್, ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ. ಶ್ರೀಧರ್ ರಾವ್, ಘಟಕದ ಮಾರ್ಗದರ್ಶಕರಾದ ಜೆ ಸಿ ಎಚ್ ಜಿ ಎಫ್ ಜೋಸೆಫ್ ಪೀರೇರ, ಕೋಶಾಧಿಕಾರಿ ಜೆ ಸಿ ವಿದ್ಯೆಂದ್ರ ಎಸ್, ಬೆಲ್ಲಾರೆ ಜೆಸಿ ಘಟಕದ ಸದಸ್ಯರಾದ ಜೆಸಿ ಸೀತಾರಾಮ್ ರೈ, ಆಶಾ ಕಾರ್ಯಕರ್ತೆರಾದ ಶ್ರೀಮತಿ ಪುಷ್ಪ ಕೆ ಗುಂಡಿಗೆದ್ದೆ, ಶ್ರೀಮತಿ ರೇವತಿ ಬಟ್ಯಾಲ್, ಶ್ರೀ ಶಕ್ತಿ ಸಂಘದ ಸರ್ವ ಸದಸ್ಯರು ಹಾಗೂ ಅಂಗನವಾಡಿ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿ ವಾಣಿ ಯನ್ನು ಅನ್ಸಿಲ್ಲಾ ರೋಶ್ನಿ ರೋಡ್ರಿ ಗಸ್ ವಾಚಿಸಿದರು. ಜೆ ಸಿ ಎಚ್ ಜಿ ಎಫ್ ಸಂತೋಷ್ ಸ್ವಾಗತಿಸಿ. ಜೆಸಿ ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya
error: Content is protected !!